ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾಗಿರುವ ಶಬರಿಮಲೆಯ ಸನ್ನಿಧಾನಂನ ಅತಿಥಿಗೃಹ ನವೀಕರಣ ವಿಚಾರವಾಗಿ ಸಲ್ಲಿಸಲಾದ ಅರ್ಜಿಯ ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿಗಳು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
.ಸುಮಾರು 75 ಕೋಟಿ ರೂ. ವೆಚ್ಚದಲ್ಲಿ ಅತಿಥಿ ಗೃಹವನ್ನು ನವೀಕರಿಸಲು ನಿರ್ಧರಿಸಲಾಗಿದ್ದು, ಈ ಬಗ್ಗೆ ಅನುಮತಿ ಕೋರಿ ತಿರುವಾಂಕೂರು ದೇವಸ್ವಂ ಮಂಡಳಿಯು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ಪರಿಶೀಲಿಸುವ ಭಾಗವಾಗಿ ನ್ಯಾಯಮೂರ್ತಿ ಅನಿಲ್ ಕೆ. ನರೇಂದ್ರನ್ ಹಾಗೂ ನ್ಯಾಯಮೂರ್ತಿ ಹರಿಶಂಕರ್ ಮೆನನ್ ಅವರು ಸನ್ನಿಧಾನಕ್ಕೆ ಖುದ್ದಾಗಿ ಭೇಟಿ ನೀಡಲಿದ್ದಾರೆ.