ದೀನದಲಿತರ ಕಲ್ಯಾಣಕ್ಕಾಗಿ ಜೀವನವನ್ನು ಮುಡಿಪಾಗಿಟ್ಟಿದ್ದ ಶ್ರೀನಿವಾಸ್‌ ನಿಧನದಿಂದ ನೋವಾಗಿದೆ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೃದಯಾಘಾತದಿಂದ ನಿಧನರಾಗಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಚಾಮರಾಜನಗರದ ಹಿರಿಯ ನಾಯಕ ಹಾಗೂ ಸಂಸದರಾದ ಶ್ರೀ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನ ಅತೀವ್ರ ನೋವು ತಂದಿದೆ. ಶ್ರೀನಿವಾಸ್ ಪ್ರಸಾದ್ ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರು ತಮ್ಮ ವಿವಿಧ ಸಮಾಜ ಸೇವೆಗಾಗಿ ಬಹಳ ಜನಪ್ರಿಯರಾಗಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!