ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂಕ್ ಭಯೋತ್ಪಾದಕಿ: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ಹರಿಪ್ರಸಾದ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂಕ್ ಭಯೋತ್ಪಾದಕಿ. ಆಕೆ ಶಿವಮೊಗ್ಗಕ್ಕೆ ಭೇಟಿಕೊಟ್ಟು ಹಿಂದುಗಳು ತಮ್ಮ ಮನೆಗಳಲ್ಲಿ ತಲ್ವಾರ್ ಚಾಕು ಚೂರಿ ಆಯುಧ ಶಾರ್ಪ್ ಮಾಡಿಟ್ಟುಕೊಳ್ಳಲು ಹೇಳಿ, ಮಕ್ಕಳ ದಾರಿ ತಪ್ಪಿಸಿದ್ದಾಳೆ. ನಾನು ಆಕೆಯನ್ನು ಭಯೋತ್ಪಾದಕಿ ಎಂದು ಕರೆಯುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅವರು ಭಾನುವಾರ ಉಡುಪಿಯ ಮಿಷನ್ ಕಂಪೌಂಡ್ ನ ಮೈದಾನದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಅನೈತಿಕ ಸರಕಾರ ಅಧಿಕಾರದಲ್ಲಿದ್ದು, ಮುಂದಿನ ಅಗ್ನಿಪರೀಕ್ಷೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ಕರಾವಳಿ ರಾಜಕಾರಣಿಗಳ ಮೇಲೆ ಅವಲಂಬನೆ ಆಗಿಲ್ಲ.ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಉಡುಪಿ, ದ.ಕ 18 ನೇ ಸ್ಥಾನಕ್ಕೆ ಹೋಗಿದೆ ಇದಕ್ಕೆ ಬಿಜೆಪಿ ಕಾರಣ. ಬಿಜೆಪಿ ರಾಜ್ಯಾಧ್ಯಕ್ಷ ವಿಧೂಷಕನ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಯವರು ಇದಕ್ಕೆ ಉತ್ತರ ಕೊಡಬೇಕು ಎಂದರು.

ಸಿಎಂ ಆರ್ ಎಸ್ ಎಸ್ ಕೈಗೊಂಬೆಯಾಗಿದ್ದು, ಪ್ರಧಾನಿ ಮೋದಿ ಪೊಲಿಟಿಕಲ್ ಟೂರಿಸಂ ಶುರು ಮಾಡಿದ್ದಾರೆ. ರಾಜ್ಯದಲ್ಲಿ ಕೊರೋನಾ, ನೆರೆ, ಪ್ರವಾಹ ಉಂಟಾದಾಗ ಬಾರದ ಮೋದಿ ಈಗ ಪೊಲಿಟಿಕಲ್ ಟೂರ್ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!