ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಗರ್ ಧನಕರ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಮತ್ತವರ 17 ಜನ ಸಹಚರರ ಮೇಲೆ ಡೆಲ್ಲಿ ಕೋರ್ಟ್ನಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಭಾರತೀಯ ದಂಡ ಸಂಹಿತೆ(ಐಪಿಸಿ)ಯಡಿ ಕೊಲೆ, ಕೊಲೆಗೆ ಯತ್ನ, ಗಲಭೆ ಸೃಷ್ಠಿ ಸೇರಿದಂತೆ ಹಲವು ಪ್ರಕರಣಗಳಡಿ ಪ್ರಕರಣ ದಾಖಲಿಸಲಾಗಿದೆ. ಇದೇ ವೇಳೆ ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳ ಮೇಲೂ ಸಹಾ ಚಾರ್ಜ್ ಶೀಟ್ನಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈಶಾನ್ಯ ದೆಹಲಿಯಲ್ಲಿರುವ ಛತ್ರಸಾಲ್ ಒಳಾಂಗಣ ಸ್ಟೇಡಿಯಂನಲ್ಲಿ ಅಭ್ಯಾಸ ನಡೆಸುತ್ತಿದ್ದ ಜೂನಿಯರ್ ನ್ಯಾಷನಲ್ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಎನ್ನುವ ಕುಸ್ತಿಪಟುವನ್ನು ಹತ್ಯೆ ಮಾಡಲಾಗಿತ್ತು. ಇದಾದ ಬಳಿಕ ಸುಶೀಲ್ ಕುಮಾರ್ ಹಾಗೂ ಮತ್ತವರ ಸಂಗಡಿಗರು ತಲೆ ಮರೆಸಿಕೊಂಡಿದ್ದರು. ಆದರೆ 2021ರ ಮೇ ತಿಂಗಳಿನಲ್ಲಿ ಡೆಲ್ಲಿ ಪೊಲೀಸರು ಸುಶೀಲ್ ಕುಮಾರ್ ಹಾಗೂ ಮತ್ತವರ ಸಂಗಡಿಗರನ್ನು ಮಂಡ್ಕಾ ಎಂಬಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.