ಮಕ್ಕಳ ಕಳ್ಳರ ವಂದತಿ: ನಾಲ್ಕು ಜನರನ್ನು ವಶಕ್ಕೆ ಪಡೆದ ಪೊಲೀಸರು

ಹೊಸದಿಗಂತ ವರದಿ, ವಿಜಯಪುರ:

ಮಕ್ಕಳ ಕಳ್ಳರ ವಂದತಿ ಹಿನ್ನೆಲೆ, ನಾಲ್ಕು ಜನರನ್ನು ನಗರದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಇಲ್ಲಿನ ಅಥಣಿ ರಸ್ತೆಯ ಸ್ಯಾಟ್‌ಲೈಟ್ ಬಸ್ ನಿಲ್ದಾಣ ಬಳಿ ನಡೆದಿದೆ.

ದೆಹಲಿ ಮೂಲದ ನಾಲ್ಕು ಜನರಾಗಿದ್ದು, ಇವರು ಹೂವು ಮಾರಾಟಗಾರರೆನ್ನುವುದು ತಿಳಿದು ಬಂದಿದೆ.

ಈ ನಾಲ್ವರು ಇಲ್ಲಿನ ಸ್ಯಾಟ್‌ಲೈಟ್ ಬಸ್ ನಿಲ್ದಾಣದಲ್ಲಿ ಮಕ್ಕಳು ಕಳ್ಳತನಕ್ಕೆ ಬಂದಿದ್ದಾರೆ ಎಂದು ಆರೋಪಿಸಿ, ಸ್ಥಳೀಯರೇ ಹಿಡಿದುಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ‌ನಡೆಸಿ, ಬಾಲ್ಕು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!