ಪ್ರತಿಯೊಂದು ಮೆಟ್ಟಿಲಲ್ಲೂ ದೀಪ ಹಚ್ಚಿದ ಸಮಂತಾ: ಪಳನಿ ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಪೂಜೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸ್ಟಾರ್ ಹೀರೋಯಿನ್ ಸಮಂತಾ ಕೆಲ ತಿಂಗಳ ಹಿಂದೆ ಮಯೋಸಿಟಿಸ್ ಸೋಂಕಿಗೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂದಿನಿಂದ, ಯಾರ ಕಣ್ಣಿಗೂ ಬೀಳದೆ, ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗದೆ ಚೆನ್ನೈನಲ್ಲಿರುವ ತನ್ನ ಮನೆಯಲ್ಲಿದ್ದುಕೊಂಡು ಚಿಕಿತ್ಸೆ ತೆಗೆದುಕೊಂಡಿದ್ದರು. ಕೆಲ ದಿನಗಳ ಹಿಂದೆ ಶಾಕುಂತಲಂ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಸಮಂತಾ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದ್ದರು.

ಅಂದಿನಿಂದ, ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿ ಮತ್ತೆ ಕೆಲಸ, ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ. ಸಮಂತಾ ಪ್ರಸ್ತುತ ಸಿಟಾಡೆಲ್ ಎಂಬ ಹಿಂದಿ ವೆಬ್ ಸರಣಿಯ ಚಿತ್ರೀಕರಣದಲ್ಲಿದ್ದಾರೆ. ವಿಚ್ಛೇದನದ ಬಳಿಕ ಸಮಂತಾ ಆಗಾಗ್ಗೆ ದೇಶದ ಅನೇಕ ದೇವಾಲಯಗಳಿಗೆ ಭೇಟಿ ಕೊಟ್ಟಿದ್ದಾರೆ. ಇದೀಗ ತಮಿಳುನಾಡಿನ ಪಳನಿಯಲ್ಲಿರುವ ಪ್ರಸಿದ್ಧ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ತೆರಳಿದ ಸಮಂತಾ ದೇವಾಲಯದ ಪ್ರತಿಯೊಂದು ಮೆಟ್ಟಿಲುಗೂ ದೀಪ ಬೆಳಗಿದ್ದಾರೆ. ಈ ದೇವಾಲಯವನ್ನು ಪ್ರವೇಶಿಸಲು 600 ಮೆಟ್ಟಿಲುಗಳನ್ನು ಹತ್ತಬೇಕು. ಮೆಟ್ಟಿಲುಗಳನ್ನು ಹತ್ತುವಾಗ ಸಮಂತಾ ಹಂತ ಹಂತವಾಗಿ ದೀಪವನ್ನು ಹಚ್ಚಿ ಭಕ್ತಿಯಿಂದ ನಮಸ್ಕರಿಸಿದ್ದರು.

ಬಳಿಕ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಇದರಿಂದ ಪಳನಿ ದೇವಸ್ಥಾನದಲ್ಲಿ ಸಮಂತಾ ಪೂಜೆ ಸಲ್ಲಿಸುತ್ತಿರುವ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಭಿಮಾನಿಗಳು ಕೂಡ ಸಮಂತಾ ಬೇಗ ಗುಣಮುಖರಾಗಲಿ, ಬೇಗ ಹೆಚ್ಚು ಸಿನಿಮಾ ಮಾಡಲಿ ಎಂದು ಬಯಸುತ್ತಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!