ಸನಾತನ ಧರ್ಮ ಹೇಳಿಕೆ ವಿವಾದ: ಸುಪ್ರೀಂಕೋರ್ಟ್ ನಿಂದ ಯಾವುದೇ ನೊಟೀಸ್ ಬಂದಿಲ್ಲ ಎಂದ ಉದಯನಿಧಿ ಸ್ಟಾಲಿನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸನಾತನ ಧರ್ಮ ಹೇಳಿಕೆ ವಿವಾದ ದೇಶದೆಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು,ಈ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕೂಡ ನೊಟೀಸ್ ನೀಡಿದೆ ಎಂದು ಸುದ್ದಿ ಹರಿದಾಡಿತ್ತು. ಆದ್ರೆ ಇದೀಗ ನನಗೆ ಯಾವ ನೊಟೀಸ್ ಕೂಡ ದಿಲ್ಲ ಎಂದು ತಮಿಳುನಾಡು ಸಿಎಂ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಉದಯನಿಧಿ ಸ್ಟಾಲಿನ್, ‘ಸುಪ್ರೀಂ ಕೋರ್ಟ್ ನೋಟಿಸ್ ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಆದರೆ, ಇದುವರೆಗೆ ಕೋರ್ಟ್ನಿಂದ ಪ್ರತಿಕ್ರಿಯೆ ನೀಡುವಂತೆ ನನಗೆ ಯಾವುದೇ ನೋಟಿಸ್ ಬಂದಿಲ್ಲ’ ಎಂದು ಉದಯನಿಧಿ ಸ್ಟಾಲಿನ್ ತಿಳಿಸಿದ್ದಾರೆ.

‘ಸನಾತನ ಧರ್ಮ’ ಕುರಿತು ಹೇಳಿಕೆ ನೀಡಿರುವ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಕೋರಿದ್ದ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಶುಕ್ರವಾರ ತಮಿಳುನಾಡು ಸರ್ಕಾರ ಮತ್ತು ಉದಯನಿಧಿ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.

ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ಬೇಲಾ ಎಂ.ತ್ರಿವೇದಿ ಅವರನ್ನು ಒಳಗೊಂಡ ನ್ಯಾಯಪೀಠವು ಶುಕ್ರವಾರ ಅರ್ಜಿ ವಿಚಾರಣೆ ನಡೆಸಿ ಪ್ರಕರಣ ಸಂಬಂಧ ಉದಯನಿಧಿಗೆ ನೋಟಿಸ್ ಜಾರಿ ಮಾಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!