ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ತಂದ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ !

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ತನ್ನ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ತಂದಿದ್ದಾರೆ. 21ನೇ ಸಿಸಿಹೆಚ್ ಕೋರ್ಟ್ ನಿಂದ ಆದೇಶ ತಂದಿದ್ದಾರೆ.

ಸುದೀಪ್ ವಿರುದ್ಧ ಬೆದರಿಕೆ ಪತ್ರ ಆಧರಿಸಿ ದೂರು ದಾಖಲಾಗಿತ್ತು. ಪತ್ರ ಆಧರಿಸಿ ಪುಟ್ಟೇನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ದೂರಿಗೆ ಸಂಬಂಧಿಸಿ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ಆದೇಶ ಹೊರಡಿಸಲಾಗಿದೆ.

ಅನಾಮದೇಯ ಪತ್ರ ಸಂಬಂಧ ಪುಟ್ಟೇನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ಸಂಬಂಧ ಸುದ್ದಿ ಪ್ರಸಾರಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಮಯೋ ಹಾಲ್ ಕೋರ್ಟ್ ಗೆ ಸುದೀಪ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಂಬಂಧ ಸೆಷನ್ಸ್ ಕೋರ್ಟ್ ವಿಚಾರಣೆ ನಡೆಸಿದೆ. ಇದೀಗ ಸುದೀಪ್ ಸಲ್ಲಿಸಿರುವ ಅರ್ಜಿ ಸಂಬಂಧ ಆದೇಶ ಹೊರ ಬಿದ್ದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!