ಸ್ಯಾಂಡಲ್​ವುಡ್​ ಯುವ ನಟನ ಬರ್ಬರ ಹತ್ಯೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದ ಆರ್‌ಆರ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ಟಣಗೆರೆ ಎಂಬಲ್ಲಿ ಶುಕ್ರವಾರ ರಾತ್ರಿ ಸ್ಯಾಂಡಲ್​ವುಡ್​ ಯುವ ನಟ ಸತೀಶ್ ವಜ್ರ ಎಂಬವರ ಭೀಕರ ಹತ್ಯೆ ನಡೆದಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ನಟನ ಬಾಮೈದನೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಇತ್ತೀಚೆಗೆ ‘ಲಗೋರಿ’ ಎಂಬ ಕಿರು ಚಿತ್ರದ ಮೂಲಕ ಸತೀಶ್ ಜನರ ಗಮನ ಸೆಳೆದಿದ್ದರು. ಶವವನ್ನು ಮರಣೋತ್ತರ ಪರಿಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಆರ್‌ಆರ್‌ನಗರ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.
3 ತಿಂಗಳ ಹಿಂದಷ್ಟೆ ಸತೀಶ್ ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದಳು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!