ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಗೊಂಡ ಬಳಿಕ ಅನೇಕ ಸಿನಿಮಾ ರಂಗದ ಕಲಾವಿದರು ಶ್ರೀ ರಾಮನ ದರುಶನ ಪಡೆದಿದ್ದರು.
ಪ್ರಭು ರಾಮನನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಭಕ್ತರು ನಿತ್ಯ ದೇವಾಲಯಕ್ಕೆ ಶ್ರೀ ರಾಮನ ದರುಶನ ಪಡೆಯಲು ತೆರಳುತ್ತಾರೆ. ಇದೀಗ ಸ್ಯಾಂಡಲ್ ವುಡ್ ಸಿಂಪಲ್ ಸ್ಟಾರ್ ಎಂದೇ ಕರೆಯಲ್ಪಡುವ ರಕ್ಷಿತ್ ಶೆಟ್ಟಿ ಅವರು ತಮ್ಮ ಸ್ನೇಹಿತರ ಜೊತೆ ಅಯೋಧ್ಯೆಗೆ ತೆರಳಿ ಶ್ರೀ ರಾಮನ ದರುಶನ ಪಡೆದಿದ್ದಾರೆ.
ರಕ್ಷಿತ್ ಶೆಟ್ಟಿ ಅಯೋಧ್ಯೆಯಲ್ಲಿ ಸ್ನೇಹಿತರೊಂದಿಗೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.