ಬೆಂಗಳೂರಿನಲ್ಲಿ ಬರೋಬ್ಬರಿ 5 ಕೋಟಿಗೂ ಅಧಿಕ ಮೌಲ್ಯದ ಗಂಧದ ತುಂಡುಗಳು ಜಪ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ 5 ಕೋಟಿಗೂ ಅಧಿಕ ಮೌಲ್ಯದ ಶ್ರೀಗಂಧವನ್ನು ವಶಪಡಿಸಿಕೊಳ್ಳಲಾಗಿದೆ. ನಗರದಲ್ಲಿ ಶ್ರೀಗಂಧ ದಂಧೆ ಮತ್ತೆ ಆರಂಭವಾಗಿದ್ದು, ಶ್ರೀಗಂಧ ಕಳ್ಳತನ ಪ್ರಕರಣಗಳ ಕುರಿತು ರಾಜ್ಯ ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ.

ವರದಿಯೊಂದರ ಪ್ರಕಾರ, ರಾಜ್ಯ ಅರಣ್ಯ ತಂಡವು K.R.ಪುರದ ಐಟಿಐ ಫ್ಯಾಕ್ಟರಿ ಆವರಣದಲ್ಲಿ ಶೋಧ ನಡೆಸಿತು ಮತ್ತು 2 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮವಾಗಿ ಸಂಗ್ರಹಿಸಿದ ಶ್ರೀಗಂಧವನ್ನು ವಶಪಡಿಸಿಕೊಂಡಿದೆ.

ಆರೋಪಿಗಳು ನೂರಾರು ಶ್ರೀಗಂಧದ ತುಂಡುಗಳನ್ನು ಸಂಗ್ರಹಿಸಿ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದರು. ನಂತರ ಆರೋಪಿಗಳನ್ನು ಬಂಧಿಸಿ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮರಗಳ್ಳರಿಗೆ ಎರಡು ಟನ್‌ಗಿಂತಲೂ ಹೆಚ್ಚು ಶ್ರೀಗಂಧ ಸಿಕ್ಕಿದ್ದು ಹೇಗೆ? ಅನಧಿಕೃತ ಶ್ರೀಗಂಧದ ಮರಗಳು ಸರ್ಕಾರಿ ಕಾರ್ಖಾನೆಗಳಿಗೆ ಸೇರಿದ್ದು ಹೇಗೆ? ಎಂದು ತನಿಖೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!