ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್​ ಗೆ ಸಿಕ್ತು ಬಿಗ್ ರಿಲೀಫ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ‘ಪುಷ್ಪ 2’ ನಟ ಅಲ್ಲು ಅರ್ಜುನ್‌ಗೆ ಹೈದರಾಬಾದ್‌ನ ನಾಂಪಲ್ಲಿ ನ್ಯಾಯಾಲಯ ಜಾಮೀನು ನೀಡಿದೆ.

ಡಿಸೆಂಬರ್ 4 ರಂದು ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಪುಷ್ಪ 2: ದಿ ರೂಲ್‌ನ ಪ್ರೀಮಿಯರ್‌ನಲ್ಲಿ ಅಲ್ಲು ಅರ್ಜುನ್ ಭಾಗವಹಿಸಿದ್ದಾಗ, ನಟನನ್ನು ನೋಡಲು ಅಪಾರ ಜನಸ್ತೋಮ ನೆರೆದಿತ್ತು. ಇದರಿಂದ ರೇವತಿ ಎಂಬ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದು, ಆಕೆಯ ಮಗುವಿಗೆ ಗಾಯಗಳಾಗಿವೆ.

ಡಿಸೆಂಬರ್ 13 ರಂದು ಮಹಿಳೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ನಗರ ಪೊಲೀಸರು ಬಂಧಿಸಿದ್ದರು. ತೆಲಂಗಾಣ ಹೈಕೋರ್ಟ್ ಅದೇ ದಿನ ಅವರಿಗೆ ನಾಲ್ಕು ವಾರಗಳ ಮಧ್ಯಂತರ ಜಾಮೀನು ನೀಡಿತು ಮತ್ತು ಡಿಸೆಂಬರ್ 14 ರಂದು ಹೈದರಾಬಾದ್‌ನ ಜೈಲಿನಿಂದ ಬಿಡುಗಡೆಗೊಂಡರು.

 

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!