ಹೊಸದಿಗಂತ ವರದಿ ವಿಜಯಪುರ:
ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ಸಂಗಮನಾಥನ ದೇವಸ್ಥಾನ ಜಲಾವೃತಗೊಂಡಿದೆ. ಇಲ್ಲಿನ ಸಂಗಮನಾಥ ಹಳ್ಳ ಮೈ ತುಂಬಿ ಹರಿಯುತ್ತಿದ್ದು, ಭಕ್ತರಿಗೆ ಸಂಗಮನಾಥನ ದರ್ಶನಕ್ಕೆ ಅಡ್ಡಿ ಉಂಟಾಗಿದೆ.
ಅಲ್ಲದೆ ಇಲ್ಲಿನ ರಸ್ತೆ ಸಂಚಾರಕ್ಕೂ ಸಂಚಕಾರ ಎದುರಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ.