ಅಂಜನಾದ್ರಿಗೆ ಕೇಬಲ್ ಕಾರ್ ಯೋಜನೆ ಜಾರಿಗೊಳಿಸಲು ಸಂಗಣ್ಣ ಮನವಿ

ಹೊಸದಿಗಂತ ವರದಿ ಕೊಪ್ಪಳ:

ಕೊಪ್ಪಳ ಏತ ನೀರಾವರಿ, ಸಿಂಗಟಾಲೂರು ಯೋಜನೆಯನ್ನು ಪೂರ್ಣಗೊಳಿಸಬೇಕು. ನವಲಿ ಸಮಾನಾಂತರ ಯೋಜನೆಗೆ ಚಾಲನೆ ನೀಡಬೇಕು. ಗಂಗಾವತಿ ರೈಲು ನಿಲ್ದಾಣ ದಿಂದ ಅಂಜನಾದ್ರಿ ವರೆಗೆ ಕೇಬಲ್ ಕಾರ್ ಯೋಜನೆ ಜಾರಿಗೊಳಿಸಬೇಕು ಸಂಸದ ಕರಡಿ ಸಂಗಣ್ಣ ಎಂದು ಮನವಿ ಮಾಡಿದರು.

ಕೊಪ್ಪಳ ದ ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಬಂದ ಬಳಿಕ ಹಣಕಾಸಿನಲ್ಲಿ ಭಾರತ ನಾಲ್ಕನೇ ಸ್ಥಾನಕ್ಕೆ ಬಂದಿದೆ. ಸಿಎಂ ಬೊಮ್ಮಾಯಿ ಹೆಚ್ಚು ಯೋಜನೆಗಳನ್ನು ಜಿಲ್ಲೆಗೆ ನೀಡಿದ್ದಾರೆ.
ಮುಂದಿನ ಚುನಾವಣೆ ಯಲ್ಲಿ 150 ಕ್ಕೂ ಅಧಿಕ ಸ್ಥಾನ ಗಳಿಸುವ ಗುರಿ ಹೊಂದಲಾಗಿದೆ. ಸಚಿವ ಆನಂದ್ ಸಿಂಗ್ ನೇತೃತ್ವದಲ್ಲಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!