ಸಂಜಯ್ ರಾವುತ್ ದೇಶದ್ರೋಹಿ : ಅಧಿವೇಶನದಲ್ಲಿ ಸಿಎಂ ಬೊಮ್ಮಾಯಿ ಗುಡುಗು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಂಜಯ್ ರಾವತ್ ದೇಶ ದ್ರೋಹಿ ಎಂದು ಅಧಿವೇಶನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಗುಡುಗಿದ್ದಾರೆ. ಸಂಜಯ್ ರಾವತ್ ದೇಶ ದ್ರೋಹಿ, ಸಂಜಯ್ ರಾವತ್ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ರಾವುತ್ ಇದೇ ರೀತಿ ಮಾತನಾಡುವುದನ್ನು ಮುಂದುವರೆಸಿದ್ರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ರಾವತ್ ಚೀನಾ ಏಜೆಂಟ್ ಇರಬಹುದೆಂಬ ಅನುಮಾನವಿದೆ, ಪ್ರಚೋದನೆ ಮಾಡಿದರೆ ಸೈನಿಕರ ರೀತಿಯಲ್ಲೇ ಹಿಮ್ಮೆಟ್ಟಿಸುತ್ತೇವೆ. ರಾವುತ್ ಮೊದಲು ಅವರ ರಾಜ್ಯದಲ್ಲಿರುವ ಜನರನ್ನು ರಕ್ಷಣೆ ಮಾಡಲಿ ಎಂದು ಬೊಮ್ಮಾಯಿ ಹೇಳಿದರು.

ಸಂಜಯ್ ರಾವತ್ ಮೊನ್ನೆಯಷ್ಟೇ ಜೈಲಿಗೆ ಹೋಗಿದ್ದರು. ಈಗ ರಾವತ್ ಬಾಯಿಗೆ ಬಂದಂತೆ ಮಾತಾಡಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿದ್ದು, ಸಂಜಯ್ ರಾವತ್ಗೆ ಮಾನ ಮರ್ಯಾದೆ ಇದ್ಯಾ? ಸಂಜಯ್ ರಾವತ್ಗೆ ನಾಗರಿಕತೆ ಗೊತ್ತಿಲ್ಲ, ಸಂಸ್ಕೃತಿ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಅಧಿವೇಶನದಲ್ಲಿ ಮಾತನಾಡಿದ ಯಡಿಯೂರಪ್ಪ ಕರ್ನಾಟಕಕ್ಕೆ ನುಗ್ಗುತ್ತೇವೆ ಎಂಬ ಸಂಜಯ್ ರಾವುತ್ ಹೇಳಿಕೆಗೆ ತಿರುಗೇಟು ನೀಡಿದ ಯಡಿಯೂರಪ್ಪ ಮಹಾರಾಷ್ಟ್ರದವರು ಮಾತಾಡಿದ ಭಾಷೆಯಲ್ಲಿ ನಾವು ಉತ್ತರಿಸಬೇಕಿಲ್ಲ, ಅವರ ಭಾಷೆಯಲ್ಲಿ ನಾವು ಉತ್ತರ ನೀಡುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!