ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತ್ರಾಚಾಲ್ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೊಳಗಾಗಿರುವ ರಾಜ್ಯಸಭಾ ಸಂಸದ ಹಾಗೂ ಶಿವಸೇನೆ ನಾಯಕ ಸಂಜಯ್ ರಾವತ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಶೇಷ ನ್ಯಾಯಾಲಯವು ವಿಸ್ತರಿಸಿ ಆದೇಶ ಹೊರಡಿಸಿದೆ. ಪತ್ರಾಚಾಲ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸಂಜಯ್ ರಾವುತ್ ಅವರನ್ನು ಬಂಧಿಸಿತ್ತು
ವಿವಾರಣೆ ನಡೆಸುತ್ತಿರುವ ಇಡಿ ಅವರ ಅವಧಿಯನ್ನು ಇನ್ನೂ ಹೆಚ್ಚು ವಿಸ್ತರಿಸಲು ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿತ್ತು.
ಆದಾಗ್ಯೂ ಸಂಸತ್ತಿನ ಕೆಲವು ನಮೂನೆಗಳಿಗೆ ಸಹಿ ಹಾಕಲು ಮತ್ತು ನ್ಯಾಯಾಲಯ ಮತ್ತು ಇಡಿಗೆ ಅದರ ಪ್ರತಿಯನ್ನು ಒದಗಿಸಲು ನ್ಯಾಯಾಲಯವು ಸಂಜಯ್ ರಾವತ್ ಅವರಿಗೆ ಅವಕಾಶ ನೀಡಲಾಗಿದೆ.
ಸಂಜಯ್ ರಾವುತ್ ಅವರ ಕುಟುಂಬ ಇಂದು ನ್ಯಾಯಾಲಯಕ್ಕೆ ಹಾಜರಾಗಿತ್ತು. ಅವರ ಅನೇಕ ಬೆಂಬಲಿಗರೂ ನ್ಯಾಯಾಲಯದ ಮೆಟ್ಟಿಲೇರಿದ್ದರು ಎಂದು ಮೂಲಗಳು ವರದಿ ಮಾಡಿವೆ.