ಸಂಕ್ರಾಂತಿ ಸಂಭ್ರಮ: ಇಂದು ಶಬರಿಮಲೆ ದೇವಾಲಯದಲ್ಲಿ ಮಕರ ಜ್ಯೋತಿ ದರುಶನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಇಂದು ಮಕರ ಜ್ಯೋತಿ ದರ್ಶನವಾಗಲಿದೆ.

ಸಂಕ್ರಾಂತಿ ನಿಮಿತ್ತ 1.5 ಲಕ್ಷ ಭಕ್ತರು ವಿಶೇಷ ಪೂಜೆ ಮತ್ತು ದರ್ಶನದಲ್ಲಿ ಪಾಲ್ಗೊಂಡರು. ಸಂಜೆ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನವಾಗಲಿದ್ದು, ಭಕ್ತರು ಕಾತರರಾಗಿದ್ದಾರೆ.

ಸಂಜೆ 6:00 ರಿಂದ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಮಕರವಿಳಕ್ಕು ಉತ್ಸವ ಜನವರಿ 19 ರಂದು ಕೊನೆಗೊಳ್ಳುತ್ತದೆ. ಮಕರ ಜ್ಯೋತಿ ದರ್ಶನಕ್ಕಾಗಿ ಈಗಾಗಲೇ ಹಲವು ಭಕ್ತರು ಶಬರಿಮಲೆಗೆ ಆಗಮಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!