ಸಂತೋಷ್ ಹೆಸರು ತಂದಿದ್ದು ಶೋಭೆ ತರಲ್ಲ, ಶೆಟ್ಟರ್‌ ಹೋಗಿದ್ದು ನಮಗೇನೂ ನಷ್ಟವಿಲ್ಲ: ಯಡಿಯೂರಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನನಗೆ ಟಿಕೆಟ್ ನೀಡದಿರಲು ಬಿಎಲ್ ಸಂತೋಷ್ (BL Santosh) ಕಾರಣ ಎಂದ ಜಗದೀಶ್ ಶೆಟ್ಟರ್‌ ಹೇಳಿಕೆಗೆ ಮಾಜಿ ಸಿಎಂ ಯಡಿಯೂರಪ್ಪ ಕಿಡಿಕಾರಿದ್ದು, ಈ ಮಾತು ಶೋಭೆ ತರಲ್ಲ. ಅವರಿಗೆ ಸಂತೋಷ್‌ರಿಂದ ಟಿಕೆಟ್ ತಪ್ಪಿದ್ದು ಎಂಬ ಮಾತು ಸುಳ್ಳು ಎಂದು ಕಿಡಿಕಾರಿದ್ದಾರೆ.

ಜಗದೀಶ್ ಶೆಟ್ಟರ್‌ಗೆ ಎಲ್ಲಾ ರೀತಿಯಿಂದಲೂ ಮನವೊಲಿಸುವ ಪ್ರಯತ್ನ ಆಗಿದೆ. ಆದರೆ ಅವರು ಅಂತಿಮವಾಗಿ ಪಕ್ಷ ಬಿಟ್ಟು ಹೋದರು. ಅವರು ಪಕ್ಷ ಬಿಟ್ಟಿರುವುದರಿಂದ ಬಿಜೆಪಿಗೆ (BJP) ಏನೂ ನಷ್ಟ ಆಗಲ್ಲ. ಏಕೆಂದರೆ ಜಗದೀಶ್ ಶೆಟ್ಟರ್ ನಂಬಿ ಅವರ ಜೊತೆಗೆ ಯಾವ ಕಾರ್ಯಕರ್ತರೂ ಹೋಗಿಲ್ಲ. ಅವರಿಗೆ ಟಿಕೆಟ್ ಸಿಗದಿರುವುದಕ್ಕೆ ಯಾರೂ ಕಾರಣರಲ್ಲ. ಸುಮ್ಮನೆ ಸಂತೋಷ್ ಹೆಸರು ತಂದಿದ್ದು ಕೂಡಾ ಶೆಟ್ಟರ್‌ಗೆ ಶೋಭೆ ತರುವುದಿಲ್ಲ ಎಂದು ತಿರುಗೇಟು ನೀಡಿದರು.

ಶೆಟ್ಟರ್ ಈ ರೀತಿಯ ತೀರ್ಮಾನ ತೆಗೆದುಕೊಳ್ಳಬಾರದಾಗಿತ್ತು. ನಾವು ಎಷ್ಟೇ ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಅವರನ್ನು ರಾಜ್ಯಸಭೆ ಸದಸ್ಯರಾಗಿ ಮಾಡುತ್ತೇವೆ ಎಂದು ಹೇಳಿದ್ದೆವು. ಈಗ ಅವರು ಹೋಗಿರುವುದರಿಂದ ನಮಗೇನೂ ನಷ್ಟವಿಲ್ಲ. ಇನ್ಮೇಲೆ ಅವರ ದಾರಿ ಅವರಿಗೆ ನಮ್ಮ ದಾರಿ ನಮಗೆ. ಬಿಜೆಪಿ ಬಹುಮತ ಪಡೆದುಕೊಂಡು ಅಧಿಕಾರಕ್ಕೆ ಬರುತ್ತದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!