ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ ನಲ್ಲಿ ಕ್ಲೀನ್ ಚಿಟ್: ಈಶ್ವರಪ್ಪ ನಿವಾಸದಲ್ಲಿ ಸಂಭ್ರಮಾಚರಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್ :

ಗುತ್ತಿಗೆದಾರ ಸಂತೋಷ್ ಪಾಟೀಲ್ ಎಂಬವರು ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನಾ ಸಂಬಂಧಿಕರಿಗೆ ತನ್ನ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಎಂದು ಸಂದೇಶ ಕಳುಹಿಸಿದ್ದರು. ಈ ಮೂಲಕ ಡೆತ್ ನೋಟ್ ನಲ್ಲಿ ಈಶ್ವರಪ್ಪ ಹೆಸರನ್ನು ಉಲ್ಲೇಖಿಸಿದ್ದರು.
ಈ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು, ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದು, ಈ ಮೂಲಕ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗದ ಅವರ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕಣರದಲ್ಲಿ ಸಚಿವ ಸ್ಥಾನಕ್ಕೆ ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡುವಂತೆ ಆಗಿತ್ತು. ಈ ಪ್ರಕರಣ ಸಂಬಂಧ ತನಿಖೆ ನಡೆಸಿದಂತ ಉಡುಪಿಯ ಪೊಲೀಸರು, ಈಶ್ವರಪ್ಪ ಪ್ರಚೋದಿಸಿದ್ದಕ್ಕೆ ಸಾಕ್ಷ್ಯಗಳೇ ಇಲ್ಲ. ಆತ್ಮಹತ್ಯೆಗೆ ಕುಮ್ಮಕ್ಕು ಎಂಬುದಕ್ಕೆ ಸಾಕ್ಷ್ಯಗಳಿಲ್ಲ ಎಂಬುದಾಗಿ ವರದಿಯಲ್ಲಿ ಉಲ್ಲೇಖಿಸಿ, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ. ಈ ಮೂಲಕ ಮಾಜಿ ಸಚಿವ ಈಶ್ವರಪ್ಪಗೆ ಕ್ಲೀನ್ ಚಿಟ್ ನೀದಿದ್ದಾರೆ.
ಈ ಬಗ್ಗೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನ್ಯಾಯಾಲಯಕ್ಕೆ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿರೋ ವಿಷಯ ಕೇಳಿ ಸಂತೋಷವಾಗಿದೆ. ನಾನು ತಪ್ಪು ಮಾಡಿಲ್ಲವೆಂದು ಮನೆದೇವರಾದ ಚೌಡೇಶ್ವರಿ ಮೇಲೆ ಆಣೆ ಮಾಡಿ ಹೇಳಿದ್ದೆನು. ಆ ತಾಯಿಯ ಆಶೀರ್ವಾದದಿಂದ ಕೇಸ್ ನಲ್ಲಿ ಖುಲಾಸೆಯಾಗಿದೆ. ಆರೋಪದಿಂದ ಮುಕ್ತನಾಗುವೆ ಎಂಬ ವಿಶ್ವಾಸವಿದೆ ಎಂಬುದಾಗಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!