ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿ ಉಣಕಲ್ ಕೆರೆ ಬಳಿ ನಡೆದ ಖ್ಯಾತ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ ಕೃತ್ಯದಲ್ಲಿ ಹಂತಕರ ನಿರ್ದಯತೆ ಖುದ್ದು ಪೊಲೀಸರನ್ನೇ ಬೆಚ್ಚಿಬೀಳಿಸಿದೆ.
ಭಕ್ತರ ಸೋಗಿನಲ್ಲಿ ಬಂದ ಹಂತಕರು ಏಕಾಏಕಿ ದಾಳಿ ನಡೆಸಿದ್ದು ಕೇವಲ 40 ಸೆಕೆಂಡ್ಗಳಲ್ಲಿ 60 ಬಾರಿ ಬರ್ಬರವಾಗಿ ಚಾಕುವಿನಿಂದ ಇರಿದಿದ್ದಾರೆ. ಅಕ್ಕಪಕ್ಕದಲ್ಲಿದ್ದವರು ಏನು ನಡೆಯುತ್ತಿದೆ ಎಂಬುದು ಅರಿವಾಗುವ ಮುನ್ನ ಹಂತಕರು ಕೃತ್ಯ ಮುಗಿಸಿ ಪರಾರಿಯಾಗಿದ್ದಾರೆ. ಘಟನಾವಳಿಗಳ ಸಿಸಿ ಕ್ಯಾಮರಾ ಫೂಟೇಜ್ ಲಭಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.