‘ಸರಳವಾಸ್ತು’ ಗುರೂಜಿ ಬರ್ಬರ ಹತ್ಯೆ: ಕೃತ್ಯದ ಹಿಂದೆ ವೈಯುಕ್ತಿಕ ವೈಷಮ್ಯ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಹುಬ್ಬಳ್ಳಿ ಉಣಕಲ್ ಕೆರೆ ಬಳಿ ನಡೆದ ಖ್ಯಾತ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆಗೆ ಸಂಬಂಸಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಮೇಲ್ನೋಟಕ್ಕೆ ವೈಯುಕ್ತಿಕ ವೈಷಮ್ಯ ಈ ಕೃತ್ಯಕ್ಕೆ ಕಾರಣ ಎಂದು ಶಂಕಿಸಲಾಗಿದ್ದು, ಬಾಡಿಗೆ ಹಂತಕನ್ನು ಬಳಸಿಕೊಳ್ಳಲಾಗಿದೆಯೇ ಎಂಬ ಆಯಾಮಗಳಲ್ಲಿಯೂ ತನಿಖೆ ಮುಂದುವರಿದಿದೆ. ಈ ನಡುವೆ ಬಂತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಇನ್ನಷ್ಟು ಮಾಹಿತಿಗಳು ಬಹಿರಂಗಗೊಳ್ಳುವ ನಿರೀಕ್ಷೆಯಿದೆ.
ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮೀಷನರ್ ಲಾಬೂರಾಮ್ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!