‘ಸರಳವಾಸ್ತು’ ಗುರೂಜಿ ಹತ್ಯೆ ಆರೋಪಿಗಳಿಗೆ 6 ದಿನ ಪೊಲೀಸ್ ಕಸ್ಟಡಿ

ಹೊಸದಿಗಂತ ವರದಿ, ಮಡಿಕೇರಿ:

ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರನ್ನು ಹತ್ಯೆಗೈದ ಆರೋಪಿಗಳನ್ನು ಪೊಲೀಸರು ಇಂದು ಕೋರ್ಟ್ ಮುಂದೆ ಹಾಜರುಪಡಿಸಿದರು.
ಹಂತಕರಾದ ಮಹಾಂತೇಶ ಶಿರೂರು ಹಾಗೂ‌ ಮಂಜುನಾಥ ದುಮ್ಮವಾಡ ಅವರನ್ನು ಹುಬ್ಬಳ್ಳಿಯ ಒಂದನೇ ಅಧಿಕ ದಿವಾಣಿ ಹಾಗೂ ಜೆಎಂಎಫ್​ಸಿ ನ್ಯಾಯಾಲಯಕ್ಕೆ ವಿದ್ಯಾನಗರ ಪೊಲೀಸರು ಹಾಜರುಪಡಿಸಿದರು.
ಪೊಲೀಸರು ವಿಚಾರಣೆಗಾಗಿ ಕಸ್ಟಡಿ‌ಗೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿ ಒಪ್ಪಿಸಿ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!