ಸಾವರ್ಕರ್​ ಕ್ಷಮಾಪಣೆ ಪತ್ರಕ್ಕೆ ಟೀಕೆ: ರಾಹುಲ್ ವಿರುದ್ಧ ಮೊಮ್ಮಗ ದೂರು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವೀರ ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದು ಜೈಲಿನಿಂದ ಹೊರಬಂದು ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿದ್ದಾರೆ ಎಂದು ರಾಹುಲ್​ ಗಾಂಧಿ ಟೀಕಿಸಿದ್ದಾರೆ. ಇದರ ವಿರುದ್ಧ ಸಾವರ್ಕರ್​ ಮೊಮ್ಮಗ ದೂರು ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಸಾಗುತ್ತಿರುವ ಭಾರತ್​ ಜೋಡೋ ಪಾದಯಾತ್ರೆಯ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್​ ಗಾಂಧಿ, ಸಾವರ್ಕರ್​ ಬಗ್ಗೆ ಮಾಜಿ ಸಿಎಂ, ಶಿವಸೇನೆಯ ಉದ್ಧವ್​ ಠಾಕ್ರೆ ಹೊಂದಿರುವ ನಿಲುವನ್ನು ಟೀಕಿಸಿದ್ದರು. ಈ ವೇಳೆ, ಪತ್ರವೊಂದನ್ನು ಪ್ರದರ್ಶಿಸಿ ಇದು ಸಾವರ್ಕರ್​ ಬ್ರಿಟಿಷರ ಬಳಿ ಕ್ಷಮೆಯಾಚಿಸಿದ ಪತ್ರ ಎಂದು ತೋರಿಸಿದರು.

ಸಾವರ್ಕರ್ ಅವರು ಬ್ರಿಟಿಷರಿಗೆ ಬರೆದ ಪತ್ರದಲ್ಲಿ “ನಿಮ್ಮ ಅತ್ಯಂತ ವಿಧೇಯ ಸೇವಕರಾಗಿ ಉಳಿಯಲು ನಾನು ಬೇಡಿಕೊಳ್ಳುತ್ತೇನೆ” ಎಂದು ಬರೆದು ಸಹಿ ಹಾಕಿದ್ದರು. ಬ್ರಿಟಿಷರಿಗೆ ಹೆದರಿದ ಸಾವರ್ಕರ್ ಅವರು ಈ ಪತ್ರ ಬರೆದಿದ್ದರು. ಇದು ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸರ್ದಾರ್ ಪಟೇಲ್ ಸೇರಿದಂತೆ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿದ್ದ ಚಳವಳಿಗಾರರಿಗೆ ಮೋಸ ಮಾಡಿದ್ದರು ಎಂದು ಹೇಳಿದರು.

ಹಿಂದುತ್ವವಾಗಿ ವಿನಾಯಕ ದಾಮೋದರ್ ಸಾವರ್ಕರ್ ಬ್ರಿಟಿಷರಿಂದ ಪಿಂಚಣಿ ಪಡೆದು ಕಾಂಗ್ರೆಸ್ ವಿರುದ್ಧ ಕೆಲಸ ಮಾಡುತ್ತಿದ್ದರು. ಅಂಡಮಾನ್ ಜೈಲಿನಲ್ಲಿದ್ದಾಗ ಕ್ಷಮಾಪಣೆ ಪತ್ರ ಬರೆದು ಬಿಡುಗಡೆಗೆ ಕೋರಿದ್ದರು ಎಂದು ಹೇಳಿದರು.

ರಾಹುಲ್​ ಗಾಂಧಿ ಅವರ ಈ ಹೇಳಿಕೆಗೆ ಕಿಡಿಕಾರಿರುವ ಸಾವರ್ಕರ್ ಮೊಮ್ಮಗ ರಂಜಿತ್​ ಸಾವರ್ಕರ್, ಕಾಂಗ್ರೆಸ್ ನಾಯಕನ ವಿರುದ್ಧ ಮುಂಬೈನ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!