ಜಲ್ಲಿಕಟ್ಟು ಪ್ರಶ್ನಿಸಿ ಅರ್ಜಿ ಸಲ್ಲಿಕೆ: ಇಂದು ಸುಪ್ರೀಂ ಕೋರ್ಟ್‌ ತೀರ್ಪು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಮಿಳುನಾಡು ಹಾಗೂ ಮಹಾರಾಷ್ಟ್ರದಲ್ಲಿ ತುಂಬಾ ಪ್ರಸಿದ್ಧಿಯಾಗಿರುವ “ಜಲ್ಲಿಕಟ್ಟು” ಕ್ರೀಡೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿ ಸುಪ್ರಿಂ ಕೋರ್ಟ್‌ನ ಸಾಂವಿಧಾನಿಕ ಪೀಠ ಇಂದು ತನ್ನ ತೀರ್ಪು ಪ್ರಕಟಿಸಲಿದೆ.

ಪ್ರಾಣಿ ಹಕ್ಕುಗಳ ಸಂರಕ್ಷಣ ಸಂಸ್ಥೆ ಪೆಟಾ ಜಲ್ಲಿಕಟ್ಟು ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೆ.ಎಂ ಜೋಸೆಫ್, ಅಜಯ್‌ ರಸ್ತೋಗಿ, ಅನಿರುದ್ಧ ಬೋಸ್‌, ಹೃಷಿಕೇಶ್‌ ರಾಯ್‌ ಮತ್ತು ಸಿ.ಟಿ. ರವಿಕುಮಾರ್‌ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಲಿದ್ದಾರೆ. ಅಲ್ಲದೆ ಜಲ್ಲಿಕಟ್ಟು ಕೇವಲ ಸಾಂಪ್ರದಾಯಿಕ ಆಚರಣೆ ಆಗಿದೆ. ಇದರಲ್ಲಿ ಪ್ರಾಣಿಗಳನ್ನು ಹಿಂಸಿಸುವ ಯಾವುದೇ ಉದ್ದೇಶ ಇಲ್ಲ. ಪೆರು, ಕೊಲಂಬಿಯಾ, ಸ್ಪೇನ್‌ ಸಹಿತ ಹಲವು ರಾಷ್ಟ್ರಗಳಲ್ಲೂ ಇಂತಹ ಆಚರಣೆಗಳಿವೆ ಎಂದು ತಮಿಳುನಾಡು ಸರ್ಕಾರದ ವಾದವಾಗಿದೆ.

ಜಲ್ಲಿಕಟ್ಟು ಕ್ರೀಡೆಯನ್ನು ಎರುತಝುವುತಲ್ ಅಂತಲೂ ಕರೆಯುತ್ತಾರೆ. ಇದು ಪೊಂಗಲ್ ಸುಗ್ಗಿಯ ಹಬ್ಬದ ಭಾಗವಾಗಿ ತಮಿಳುನಾಡಿನಲ್ಲಿ ಗೂಳಿ ಪಳಗಿಸುವ ಕ್ರೀಡೆ ಆಗಿದೆ. ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ತೀರ್ಪು ಪ್ರಕಟಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!