ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಎಸ್ಆರ್ಟಿಸಿ ಬಸ್ ಮತ್ತು ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ಸಂಭವಿಸಿದ ಅಪಘಾತದಲ್ಲಿ 32 ವಿದ್ಯಾರ್ಥಿಗಳು ಸಮರ್ಥ್(7), ಶ್ರೀಕಾಂತ್(12) ಮೃತ ವಿದ್ಯಾರ್ಥಿಗಳು. 32 ಜನರ ಪೈಕಿ 18 ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತು 14 ವಿದ್ಯಾರ್ಥಿಗಳಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಕೈ, ಕಾಲು ಛಿದ್ರಗೊಂಡಿವೆ. ಪೋಷಕರು ಘಟನೆ ನಡೆದ ಸ್ಥಳಕ್ಕೆ ಬಂದು ರೋದಿಸಿದ್ದಾರೆ. ಮಕ್ಕಳ ಪರಿಸ್ಥಿತಿ ನೋಡಿ ಬಿಕ್ಕಿ ಬಿಕ್ಕಿ ಅತ್ತಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಆಸ್ಪತ್ರೆಯತ್ತ ಮಕ್ಕಳ ಪೋಷಕರು ಆಗಮಿಸುತ್ತಿದ್ದು, ಐಸಿಯುನಲ್ಲಿ ಮಕ್ಕಳನ್ನ ತೋರಿಸುವಂತೆ ಪೋಷಕರು ಪಟ್ಟು ಹಿಡಿದಿದ್ದಾರೆ.
ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗಾಯಗೊಂಡ ಮಕ್ಕಳ ಚಿಕಿತ್ಸೆಗೆ ತಲಾ 3 ಲಕ್ಷ ರೂ. ನೆರವು ನೀಡಲಾಗುತ್ತಿದೆ ಎಂದಿದ್ದಾರೆ.