ಅಗ್ನಿಶಾಮಕದಳ ಕಚೇರಿ ಬಳಿಯೇ ಹೊತ್ತಿ ಉರಿದ ಶಾಲಾ ವಾಹನ: ವ್ಯಕ್ತಿ ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಾಣಸವಾಡಿ ಅಗ್ನಿಶಾಮಕದಳ ಕಚೇರಿ ಬಳಿಯೇ ಶಾಲಾ ವಾಹನವೊಂದು ಹೊತ್ತಿ ಉರಿದಿದ್ದು, ಅದರೊಳಗಿದ್ದ ವ್ಯಕ್ತಿ ಸಜೀವ ದಹನ ಆಗಿದ್ದಾರೆ.

OMBR ಲೇಔಟ್‌ನಲ್ಲಿ ರಾತ್ರಿ 10:08 ಕ್ಕೆ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕದಳ ವಾಹನ ದೌಡಾಯಿಸಿ ಬೆಂಕಿ‌ ನಂದಿಸಲಾಗಿದೆ. ಬಸ್ಸಿನ ಒಳಗೆ ಒಬ್ಬರು ಸಜೀವ ದಹನವಾಗಿದ್ದಾರೆ ಎಂದು ಬಾಣಸವಾಡಿ ಅಗ್ನಿಶಾಮಕದಳ ಕಚೇರಿ ಮಾಹಿತಿ ನೀಡಿದೆ.

ಬಸ್‌ನ ಓಳಗೆ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ‌ಯಾಗಿದೆ. ಸುಮಾರು 30 ವರ್ಷದ ಆಸುಪಾಸಿನ ವ್ಯಕ್ತಿ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ರಾಮಮೂರ್ತಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರುಣ್ ಎಂಬವರಿಗೆ ಸೇರಿದ ಖಾಸಗಿ ಶಾಲೆ ಬಸ್ ಇದಾಗಿದೆ. ಘಟನೆಯಲ್ಲಿ ಮೃತ ವ್ಯಕ್ತಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆ ಸಂಬಂಧ ಪೊಲೀಸರು ಯುಡಿಆರ್‌ ದಾಖಲಿಸಿಕೊಂಡಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಖಾಸಗಿ ಬಸ್‌ನಲ್ಲಿ ಚಾಪೆ, ದಿಂಬು ತಂದು ವ್ಯಕ್ತಿ ಮಲಗಿದ್ದ ಎಂಬುದು ಪರಿಶೀಲನೆಯಿಂದ ಗೊತ್ತಾಗಿದೆ. ಸುಮಾರು ಮೂರು ತಿಂಗಳಿನಿಂದ ಶಾಲಾ ಬಸ್‌ ಕೆಟ್ಟು ನಿಂತಿತ್ತು. 14 ವರ್ಷದ ಹಳೆ ಬಸ್‌ಗೆ ಎಫ್‌ಸಿ, ಇನ್ಯೂರೆನ್ಸ್ ಮುಗಿದಿತ್ತು. ಹೀಗಾಗಿ, OMBR ಲೇಔಟ್ ರಸ್ತೆಯಲ್ಲಿ ಮಾಲೀಕ ಅರುಣ್ ಬಸ್ ನಿಲ್ಲಿಸಿದ್ದರು. ನಿನ್ನೆ ಸಂಜೆ ಕೂಡ ಬಸ್ ಬಳಿ ಬಂದು ನೋಡಿಕೊಂಡು ಹೋಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!