ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶಾಲಾ ಬಸ್ ಹರಿದು ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನಶಂಕರಿಯ ದೇವೇಗೌಡ
ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಹಾರೋಹಳ್ಳಿಯ ನಿವಾಸಿ ಕೀರ್ತನಾ (16) ಎಂಬ ಬಾಲಕಿ ದುರ್ಮರಣ ಹೊಂದಿದ್ದಾಳೆ.
ಬೈಕ್ನಲ್ಲಿ ಹರ್ಷಿತಾ, ಮೃತ ಕೀರ್ತನಾ ಬರುತ್ತಿದ್ದರು. ಆಗ ಹಿಂದಿನಿಂದ ಬಂದ ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದ್ದು , ಕೆಳಗೆ ಬಿದ್ದ ಬಾಲಕಿ ಕೀರ್ತನಾ ಮೇಲೆ ಶಾಲಾ ಬಸ್ ಹರಿದಿದೆ. ಕೀರ್ತನಾಳನ್ನ ಹಿಂದೆ ಕೂರಿಸಿಕೊಂಡು ಹೋಗ್ತಿದ್ದ ಅಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಬಾಲಕಿ ಕೀರ್ತನಾ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಕಿಮ್ಸ್ ಶವಾಗಾರದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ