ಕುಶಾಲನಗರದಲ್ಲಿ ಶಾಲಾ ವಿದ್ಯಾರ್ಥಿನಿ ನೇಣಿಗೆ ಶರಣು

ಹೊಸದಿಗಂತ ವರದಿ, ಕುಶಾಲನಗರ:

ಶಾಲಾ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ಇಲ್ಲಿಗೆ ಸಮೀಪದ ಬ್ಯಾಡಗೊಟ್ಟ‌ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಕಾಂತ ಎಂಬವರ ಪುತ್ರಿ, 10 ನೇ ತರಗತಿ ವಿದ್ಯಾರ್ಥಿನಿ ಬಿ.ಎಸ್.ಅಂಬಿಕಾ ಎಂಬಾಕೆ ಆತ್ಮಹತ್ಯೆ ‌ಮಾಡಿಕೊಂಡಾಕೆ.
ಕೂಡಿಗೆಯ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿನಿಯಾಗಿರುವ ಅಂಬಿಕಾ ಭಾನುವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಈ ಕೃತ್ಯ ಮಾಡಿಕೊಂಡಿರುವುದಾಗಿ ಹೇಳಲಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು‌ಬಂದಿಲ್ಲ.
ಕುಶಾಲನಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!