ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಜಾಬ್ ವಿವಾದದ ಕಿಚ್ಚು ಇನ್ನೂ ತಣ್ಣಗಾಗಿಲ್ಲ. ಈ ಮಧ್ಯೆಯೇ 9 ಮತ್ತು 10ನೇ ತರಗತಿ ಶಾಲೆ ಆರಂಭವಾಗಿದೆ.
ಹಿಜಾಬ್ ವಿವಾದ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭುಗಿಲೆದಿದ್ದು, ರಾಜ್ಯ ಸರ್ಕಾರ ಕಳೆದ ವಾರ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿತ್ತು.
ಹಿಜಾಬ್ ವಿವಾದದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು,ಬಿಗಿ ಬಂದೋಬಸ್ತ್ ಮಾಡಲಾಗಿದೆ. ಪೊಲೀಸ್ ಮತ್ತು ಅಧಿಕಾರಿಗಳು ಬಿಗಿ ಕ್ರಮ ಕೈಗೊಂಡಿದ್ದು, ಹದ್ದಿನ ಕಣ್ಣಿಡುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಶಾಲೆಗಳ ಸುತ್ತಮುತ್ತ ಮಕ್ಕಳು, ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಹೊರತಾಗಿ ಬೇರೆ ಯಾರಿಗೂ ಪ್ರವೇಶ ಇಲ್ಲ. ಶಾಲೆಯ ಸುತ್ತಮುತ್ತ ಯಾರೂ ಗುಂಪು ನಿಂತು ಮಾತನಾಡುವಂತಿಲ್ಲ. ಅನಗತ್ಯ ಚರ್ಚೆ, ಪ್ರಚಾರಕ್ಕೆ ಕಡಿವಾಣ ಹಾಕಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇಡಲಾಗಿದೆ.
ಹಿಜಾಬ್ ಸಂಬಂಧಿಸಿ ಹೈಕೋರ್ಟ್ನ ವಿಸ್ತೃತ ಪೀಠದಲ್ಲಿ ಇಂದು ವಿಚಾರಣೆ ನಡೆಯಲಿದ್ದು, ತೀರ್ಪು ಏನಾಗಿರಲಿದೆ ಕಾದು ನೋಡಬೇಕಿದೆ.