ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದೆಡೆ ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ವಿಚಾರಣೆ ನಡೆಸಲಿರುವ ಬೆನ್ನಲ್ಲೇ ಮತ್ತೊಬ್ಬ ಆಪ್ ಸಚಿವರ ಮನೆ ಮೇಲೆ ಶೋಧ ನಡೆಯುತ್ತಿದೆ.ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕ್ಯಾಬಿನೆಟ್ ಸಚಿವ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ರಾಜ್ ಕುಮಾರ್ ಆನಂದ್ ನಿವಾಸದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ದೆಹಲಿಯ ಒಂಬತ್ತು ಭಾಗಗಳಲ್ಲಿ ಶೋಧ ನಡೆಸುತ್ತಿದೆ.
7 ಕೋಟಿಗೂ ಹೆಚ್ಚು ಕಸ್ಟಮ್ಸ್ ವಂಚನೆ ಮತ್ತು ಅಂತರಾಷ್ಟ್ರೀಯ ಹವಾಲಾ ವಹಿವಾಟಿನಲ್ಲಿ ಆನಂದ್ ಭಾಗಿಯಾಗಿರುವ ಶಂಕೆ ಇದೆ. ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್ಐ) ಸಲ್ಲಿಸಿದ ಪ್ರಾಸಿಕ್ಯೂಷನ್ ದೂರಿನ ಆಧಾರದ ಮೇಲೆ ಹುಡುಕಾಟವನ್ನು ಪ್ರಾರಂಭಿಸಲಾಗಿದೆ. ಆನಂದ್ ದೆಹಲಿಯ ಸಮಾಜ ಕಲ್ಯಾಣ ಮತ್ತು SC/ST ಕಲ್ಯಾಣ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ.
ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮದ್ಯ ನೀತಿ ಹಗರಣದಲ್ಲಿ ಇಡಿ ಮುಂದೆ ಹಾಜರಾಗುವ ಕೆಲವೇ ಗಂಟೆಗಳ ಮೊದಲು ಆನಂದ್ ಅವರ ಮನೆ ಮೇಲೆ ದಾಳಿ ನಡೆಸಲಾಯಿತು. ಕೇಜ್ರಿವಾಲ್ ಅವರ ಸಹಚರ, ದೆಹಲಿಯ ಮಾಜಿ ಉಪ ಸಚಿವ ಮನೀಶ್ ಸಿಸೋಡಿಯಾ ಈಗಾಗಲೇ ಇದೇ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಮತ್ತೊಬ್ಬ ಎಎಪಿ ನಾಯಕ, ದೆಹಲಿಯ ಮಾಜಿ ಸಚಿವ ಸಂಜಯ್ ಸಿಂಗ್ ಕೂಡ ಮದ್ಯ ನೀತಿ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ.