ಕಲಬುರಗಿ ನಗರದ ವಿವಿಧ ದೇವಸ್ಥಾನಗಳ ಸುತ್ತ ಸೆಕ್ಷನ್ 144 ಜಾರಿ

ಹೊಸದಿಗಂತ ವರದಿ, ಕಲಬುರಗಿ:

ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದಗಾ೯ದಲ್ಲಿನ ಶಿವಲಿಂಗ ಶುದ್ದೀಕರಣ ಹಿನ್ನೆಲೆಯಲ್ಲಿ ಕಲಬುರಗಿ ನಗರದ ವಿವಿಧ ದೇವಸ್ಥಾನಗಳ ಸುತ್ತ ಮುತ್ತ 144 ನಿಷೇಧಾಜ್ಞೆ ಜಾರಿ ಮಾಡಿ ನಗರ ಪೋಲಿಸ್ ಆಯುಕ್ತ ವೈ.ಎಸ್. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
ನಗರದ ಶ್ರೀ ರಾಮ ಮಂದಿರ, ಶ್ರೀ ಶರಣಬಸವೇಶ್ವರ ದೇವಸ್ಥಾನ ಮತ್ತು ಶ್ರೀ ವಿಶ್ವರಾಧ್ಯ ದೇವಸ್ಥಾನಗಳ ಸುತ್ತಲೂ ನಿಷೇಧಾಜ್ಞೆ ವಿಧಿಸಲಾಗಿದೆ.
ನಗರದ ವಿವಿಧ ದೇವಸ್ಥಾನಗಳಿಂದ ಶಿವಲಿಂಗ ಶುದ್ದೀಕರಣದ ಕಾಯ೯ಕ್ಕೆ ಅನೇಕ ಹಿಂದೂ ಪರ ಸಂಘಟನೆಗಳ ಕಾಯ೯ಕತ೯ರು ತೆರಳುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ.
ಇನ್ನೂ ಇದಕ್ಕೂ ಮುನ್ನ ಆಳಂದ ಪಟ್ಟಣದ ದಗಾ೯ದಲ್ಲಿನ ಶಿವಲಿಂಗ ಶುದ್ದೀಕರಣ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಬೆಳಿಗ್ಗೆಯಿಂದ ರಾತ್ರಿವರೆಗೆ ಮಧ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಪ್ರಭಾರಿ ಡಿಸಿ ಡಾ. ದಿಲಿಸ್ ಸಸಿ ಆದೇಶ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!