ಸೆ. 26 ರಂದು ಬೆಂಗಳೂರು ಬಂದ್ ಗೆ ಕರೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾವೇರಿ ನೀರಿನ ವಿಚಾರ ಸೆಪ್ಟೆಂಬರ್ 26 ರಂದು ಬೆಂಗಳೂರು ನಗರ ಬಂದ್ ಗೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೀಡಿದ್ದು, ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ವಿಷಯದ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂದ್ ಪ್ರತಿಭಟನೆ ಮಾಡುವುದಕ್ಕೆ ನನ್ನ ವಿರೋಧವಿಲ್ಲ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಅಭಿಪ್ರಾಯ ಹೇಳಲು ಹಕ್ಕಿದೆ. ಅಭಿಪ್ರಾಯ ಹೇಳುವುದನ್ನು ತಡೆಯಲು ಆಗುವುದಿಲ್ಲ ಎಂದು ಅವರು ತಿಳಿಸಿದರು.

ವಿಪಕ್ಷಗಳದ ಬಿಜೆಪಿ ಮತ್ತು ಜೆಡಿಎಸ್ ಸುಪ್ರೀಂ ಕೋರ್ಟ್ ಆದೇಶ ಬರುವ ಮುನ್ನ ನೀರು ಬಿಟ್ಟಿದ್ದಾರೆಂದು ಆರೋಪಿಸುತ್ತಿವೆ.ಬಿಜೆಪಿ ಜೆಡಿಎಸ್ ಆರೋಪಗಳಿಗೆ ಉತ್ತರ ನೀಡಲು ಆಗಲ್ಲ ನ್ಯಾಯಾಲಯದಲ್ಲಿ ಸುಳ್ಳು ಹೇಳಲು ಆಗುತ್ತಾ? ಎಂದು ಪ್ರಶ್ನಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!