ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಇಂದು ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದೆ, ಈ ಬಾರಿ 81.15% ಫಲಿತಾಂಶ ಬಂದಿದೆ. ಅಂದರೆ ಈ ಬಾರಿ 18.85% ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. ಪರೀಕ್ಷೆಗೆ ಹಾಜರಾದ 6,98,378 ವಿದ್ಯಾರ್ಥಿಗಳಲ್ಲಿ 5,52690 ವಿದ್ಯಾರ್ಥಿಗಳು ಪಾಸ್ ಆಗಿದ್ದು, 1,45,688 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.
ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅವಕಾಶ ನೀಡುತ್ತಿದೆ. ಅದಕ್ಕಾಗಿ 1 ವಾರಗಳ ಕಾಲಾವಕಾಶ ನೀಡಿದೆ. ಮರು ಪರೀಕ್ಷೆಗೆ ಹೆಸರು ನೋಂದಾವಣೆ ಮಾಡಲು ಇಂದಿನಿಂದಲೇ ಕಾಲಾವಕಾಶ ನೀಡಲಾಗಿದೆ.
ಏಪ್ರಿಲ್ 10 ರಿಂದ ಎಪ್ರಿಲ್ 16ರವೆಗೆ 1 ವಾರಗಳ ಕಾಲ ಹೆಸರು ನೋಂದಣಿಗೆ ಅವಕಾಶ ನೀಡಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯಲು ಇಚ್ಚಿಸಿದಲ್ಲಿ ಕಾಲೇಜು ಅಥವಾ ಪರೀಕ್ಷಾ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in/ ನಲ್ಲಿ ಹೆಸರು ನೋಂದಾವಣೆ ಮಾಡಬಹುದು.