ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಕಂದರಾಬಾದ್ ಹೊಟೇಲ್ ಅಗ್ನಿ ಅವಘಡದಲ್ಲಿ ಎಂಟು ಮಂದಿ ಮೃತಪಟ್ಟಿದ್ದು, ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಸಂತ್ರಸ್ಥರಿಗೆ ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಸಿಕಂದರಾಬಾದ್ನ ರೂಬಿ ಪ್ರೈಡ್ ಹೊಟೇಲ್ನಲ್ಲಿ ಅಗ್ನಿ ಅವಘಡ ಸಂಭವಿದ್ದು, ಕಟ್ಟಡದ ಕೆಳ ಭಾಗದಲ್ಲಿ ಎಲೆಕ್ಟ್ರಿಕ್ ಶೋರೂಂನಲ್ಲಿ ಬ್ಯಾಟರಿ ಸ್ಫೋಟವಾಗಿ ಬೆಂಕಿ ಆರಭವಾಗಿದೆ.
ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಕುಟುಂಬಗಳನ್ನು ನೋವನ್ನು ಭರಿಸುವ ಶಕ್ತಿ ಸಿಗಲಿ. ಮೃತರಿಗೆ ತಲಾ ಎರಡು ಲಕ್ಷ ರೂ ಪರಿಹಾರ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ ಎಂದಿದ್ದಾರೆ.