ಬ್ಯಾಂಕ್‌ ಮ್ಯಾನೇಜರ್‌ ಹತ್ಯೆಗೆ ಕಾರಣವಾಗಿದ್ದ ಉಗ್ರರನ್ನು ಹೊಡೆದುರುಳಿಸಿದ ಭದ್ರತಾಪಡೆಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಇವರಲ್ಲಿ ಒಬ್ಬ ರಾಜಸ್ಥಾನದ ಹನುಮಗಢ ಮೂಲದ ಬ್ಯಾಂಕ್‌ ಮ್ಯಾನೇಜರ್‌ ವಿಜಯ್ ಕುಮಾರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

ಶೋಪಿಯಾನ್‌ನ ಕಂಜಿಯುಲಾರ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತರಾದ ಉಗ್ರರನ್ನು ಜಾನ್ ಮೊಹಮ್ಮದ್ ಲೋನ್ ಮತ್ತು ಆತನ ಸಹಚರ ತುಫೈಲ್ ಗುಣೈ ಎಂದು ಗುರುತಿಸಲಾಗಿದೆ. ಇವರಿಬ್ಬರೂ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾಗೆ ಸೇರಿದವರು ಎನ್ನಲಾಗಿದೆ.

ಕುಲ್ಗಾಮ್‌ನ ಕುಜಾರ್ ಗ್ರಾಮದಲ್ಲಿ ನಡೆಯುತ್ತಿರುವ ಮತ್ತೊಂದು ಎನ್‌ಕೌಂಟರ್‌ನಲ್ಲಿ, ಶಾಲಾ ಶಿಕ್ಷಕಿ ರಜನಿ ಬಾಲಾ ಹತ್ಯೆಯಲ್ಲಿ ಭಾಗಿಯಾಗಿರುವ ಶಂಕಿತ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹಿಮ್ಮೆಟ್ಟಿಸಿದ್ದು, ಆತನನ್ನು ಬಂಧಿಸಲು ಜಾಲ ಬೀಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!