ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಲಾರ್ಪಣೆ ಮಾಡಿದ ರಿಯಾಜ್ ಸಿದ್ದಾಪುರ ರ್ಯಾಲಿ ಉಸ್ತುವಾರಿ ವಹಿಸಿಕೊಂಡಿದ್ದ. ಆತ ತುಂಬಾ ಒಳ್ಳೇ ಹುಡುಗ, ಅವನಿಗೆ ಗನ್ ಲೈಸೆನ್ಸ್ ಇದೆ ಎಂದು ಕಾಂಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್ ಅವರು ಹೇಳಿದ್ದಾರೆ.
ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ದಕ್ಷಿಣ ಲೋಕಸಊಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಚಾರ ನಡೆಸುವಾಗ ಭದ್ರತಾಲೋಪವಾಗಿತ್ತು.
ವಿಲ್ಸನ್ ಗಾರ್ಡನ್ ಬಳಿ ತೆರೆದ ವಾಹದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ಸಿದ್ದಾಪುರದ ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಎಂಬಾತ ಸೊಂಟದಲ್ಲಿ ಗನ್ ಇರಿಸಿಕೊಡು ಪ್ರಚಾರದ ವಾಹನ ಏರಿ ಮುಖ್ಯಮಂತ್ರಿಗಳಿಗೆ ಹಾರ ಹಾಕಿದ್ದು, ಈ ಘಟನೆ ಚರ್ಚೆಗೆ ಗ್ರಾಸವಾಗಿದೆ.