ಲೋಕಸಭೆಯಲ್ಲಿ ಭದ್ರತಾ ಲೋಪ: ದೆಹಲಿ ಪೊಲೀಸರಿಂದ 6ನೇ ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಕಲಾಪದ ವೇಳೆ ನಡೆದ ಭದ್ರತೆ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 6ನೇ ಆರೋಪಿ ಮಹೇಶ್ ಕುಮಾವತ್ (Mahesh Kumawat) ಅನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಪ್ರಕರಣದಲ್ಲಿ ಮಾಸ್ಟರ್‌ಮೈಂಡ್ ಆಗಿರುವ ಲಲಿತ್ ಝಾ ದೆಹಲಿಯಿಂದ ತಪ್ಪಿಸಿಕೊಳ್ಳವಲ್ಲಿ ಮಹೇಶ್ ಕುಮಾವತ್ ಸಹಾಯ ಮಾಡಿದ ಆರೋಪದ ಮೇರೆಗೆ ಆತನನ್ನು ಇಂದು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಪ್ರಕರಣದ ಪ್ರಮುಖ ಪಾತ್ರಧಾರಿ ಪಶ್ಚಿಮ ಬಂಗಾಳ ಮೂಲದ ಲಲಿತ್ ಝಾನನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದು, ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಸಂಸತ್ತಿನ ಭದ್ರತೆಯನ್ನು ಉಲ್ಲಂಘಿಸುವ ಸಂಚು ರೂಪಿಸಲು ಎಲ್ಲಾ ಆರೋಪಿಗಳು ಹಲವು ಬಾರಿ ಭೇಟಿಯಾಗಿದ್ದರು ಎಂದು ಸ್ವತಃ ಆರೋಪಿಗಳೇ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!