ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಕಲಾಪದ ಸಂದರ್ಭ ವೀಕ್ಷಕರ ಗ್ಯಾಲರಿಯಿಂದ ಸಂಸತ್ ಸದನಕ್ಕೆ ಜಿಗಿದು ಇಬ್ಬರ ಸಹಿತ ನಾಲ್ವರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಈ ಘಟನೆಯಿಂದಾಗಿ ದೇಶದಲ್ಲಿನ ಕಾನೂನು ಸುವ್ಯವಸ್ಥೆಯ ಬಗ್ಗೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡುವಂತೆ, ರಾಷ್ಟ್ರಪತಿಗಳನ್ನು ಭೇಟಿಯಾಗಿ ಮನವಿ ಮಾಡೋದಕ್ಕೆ ಇಂಡಿಯಾ ಮೈತ್ರಿಕೂಟದ ನಾಯಕರು ನಿರ್ಧರಿಸಿದ್ದಾರೆ.
ಸಂಸತ್ತಿನ ಭದ್ರತೆಯ ಉಲ್ಲಂಘನೆಯ ವಿಷಯದ ಬಗ್ಗೆ ವಿರೋಧ ಪಕ್ಷದ ನಾಯಕರ ನಿಯೋಗವು ರಾಷ್ಟ್ರಪತಿಗಳನ್ನು ಭೇಟಿ ಮಾಡಲಿದೆ. ಇದಕ್ಕೆ ಸಂಬಂಧಿಸಿದಂತೆ, ನಾಳೆ ಬೆಳಿಗ್ಗೆ 10 ಗಂಟೆಗೆ ಸಂಸತ್ತಿನಲ್ಲಿ ಎನ್ಡಿಎ ಮೈತ್ರಿಕೂಟದ ನಾಯಕರ ಸಭೆ ನಡೆಯಲಿದ್ದು, ರಾಷ್ಟ್ರಪತಿಗಳಿಂದ ಸಮಯ ಕೋರಲಾಗುವುದು ಎಂದಿದ್ದಾರೆ. .