ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಕಲಾಪದ ವೇಳೆ ಭಾರಿ ಭದ್ರತಾ ಲೋಪದ ಬಳಿಕ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಅವರಲ್ಲಿ ಇಬ್ಬರೂ ಮೈಸೂರಿನವರು ಎಂದು ತಿಳಿದುಬಂದಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ಪಿಎ ಈ ಇಬ್ಬರಿಗೆ ಎಂಟ್ರಿ ಪಾಸ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಹಾಗಾಗಿ ಸಂಸದ ಪ್ರತಾಪ್ ಸಿಂಹ (Pratap Simha) ಅವರನ್ನು ಸಹ ವಿಚಾರಣೆಗೆ ಒಳಪಡಿಸಿ ಎಂದು ರಾಜ್ಯ ನಾಯಕರು ಹೇಳಿದ್ದು, ಮತ್ತೊಂದೆಡೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.
ಇದರ ಬೆನ್ನೆಲೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ. ಆದರೆ ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲವೆಂಬಂತೆ ವಿದ್ಯಾರ್ಥಿಗಳೊಂದಿಗಿನ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.
‘ಸೋಮವಾರ ವಿದ್ಯಾವರ್ಧಕ ಕಾಲೇಜಿನ ರಾಜ್ಯಶಾಸ್ತ್ರ ವಿದ್ಯಾರ್ಥಿಗಳೊಂದಿಗೆ’ ಎಂದು ಬರೆದುಕೊಂಡಿದ್ದಾರೆ. ಮೈಸೂರಿನ ಇಬ್ಬರಿಗೆ ಎಂಟ್ರಿ ಪಾಸ್ ಬಗ್ಗೆ ಸಂಸದ ಪ್ರತಾಪ್ ಸಿಂಹ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
With Vidyavardhaka College Political Science students on Monday. pic.twitter.com/TOoepq5z3E
— Pratap Simha (@mepratap) December 13, 2023
ಲೋಕಸಭೆಯಲ್ಲಿ ಆತಂಕ ಸೃಷ್ಟಿಸಿದ್ದವರ ಪೈಕಿ ಒಬ್ಬ ಸಾಗರ್ ಶರ್ಮಾ ಆಗಿದ್ದರೆ, ಮತ್ತೋರ್ವ ಮೈಸೂರು ಮೂಲದ ವಿದ್ಯಾರ್ಥಿ ಮನೋರಂಜನ್ ಅಂತ ಹೇಳಲಾಗುತ್ತಿದೆ. ಸಂಸದ ಪ್ರತಾಪ್ ಸಿಂಹ ಪಿಎ ಮೂಲಕ ಈ ಇಬ್ಬರು ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಗೆ ಎಂಟ್ರಿ ಕೊಟ್ಟಿದ್ದರು ಎನ್ನಲಾಗುತ್ತಿದೆ. ಇಬ್ಬರನ್ನ ದೆಹಲಿ ಪೊಲೀಸರು ಬಂಧಿಸಿದ್ದು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ.