ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಗಮಿಸಿದ್ದ ಕಾರ್ಯಕ್ರಮದಲ್ಲಿ ಭದ್ರತಾ ಲೋಪ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ ಮಾರ್ಟ್‌ನಲ್ಲಿ ನಡೆದ ವಾಟರ್ ವೀಕ್ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ದೇಶದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಗಮಿಸಿದ್ದರು. ಈ ವೇಳೆ ಭದ್ರತೆಲೋಪವಾಗಿದೆ ಎನ್ನಲಾಗುತ್ತಿದೆ.
ಭದ್ರತೆಗೆ ನಿಯೋಜಿಸಲಾಗಿದ್ದ 15 ಪೊಲೀಸರು ಗೈರುಹಾಜರಾಗಿದ್ದರು . ಗ್ರೇಟರ್ ನೋಯ್ಡಾದ ಡಿಸಿಪಿ ಅಭಿಷೇಕ್ ವರ್ಮಾ ಅವರು​ ಈ ಕುರಿತು ತನಿಖೆ ನಡೆಸಿದಾಗ ಇಬ್ಬರು ಪೊಲೀಸ್ ಠಾಣೆಗಳ ಪ್ರಭಾರಿಗಳು, ಐಟಿ ಸೆಲ್‌ನ ಒಬ್ಬ ಇನ್‌ಸ್ಪೆಕ್ಟರ್, ಒಬ್ಬ ಸಬ್ ಇನ್‌ಸ್ಪೆಕ್ಟರ್, ಮಹಿಳಾ ಸಬ್ ಇನ್‌ಸ್ಪೆಕ್ಟರ್, ಆರು ಹೆಡ್ ಕಾನ್‌ಸ್ಟೆಬಲ್‌ಗಳು, ನಾಲ್ವರು ಮಹಿಳಾ ಕಾನ್‌ಸ್ಟೆಬಲ್‌ಗಳು ಗೈರುಹಾಜರಾಗಿರುವುದು ಕಂಡುಬಂದಿದೆ.
ಇವರ ಪೈಕಿ ಹಲವು ಪೊಲೀಸರು ನಿಗದಿತ ಸಮಯಕ್ಕಿಂತಲೂ ಬಹಳ ವಿಳಂಬವಾಗಿ ಸ್ಥಳಕ್ಕೆ ಆಗಮಿಸಿದ್ದು, ಅವರನ್ನು ಗೈರುಹಾಜರಿ ಪಟ್ಟಿಯಲ್ಲಿ ಸೇರಿಸಲಾಗಿದೆ. ಉಪ ರಾಷ್ಟ್ರಪತಿಗಳ ಭದ್ರತೆಗೆ ಸಂಬಂಧಿಸಿದಂತೆ ಗ್ರೇಟರ್ ನೋಯ್ಡಾ ಪೊಲೀಸ್‌ನ ಉನ್ನತ ಅಧಿಕಾರಿಗಳು ಬಿಗಿ ಭದ್ರತೆಯನ್ನು ಏರ್ಪಡಿಸಿದ್ದರು.
ಈ ಸಂದರ್ಭ ಗ್ರೇಟರ್ ನೋಯ್ಡಾದ ಡಿಸಿಪಿ ಅಭಿಷೇಕ್ ವರ್ಮಾ ಮತ್ತು ಹೆಚ್ಚುವರಿ ಡಿಸಿಪಿ ವಿಶಾಲ್ ಪಾಂಡೆ ಭದ್ರತೆಯ ಬಗ್ಗೆ ನಿಗಾ ಇರಿಸಿದ್ದರು. ಈ ವೇಳೆ ವರ್ಮಾ ಪೊಲೀಸ್ ಪಡೆ ಪರಿಶೀಲನೆ ನಡೆಸಿದಾಗ ಕೆಲ ಪೊಲೀಸರು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಬಾರದಿರುವುದು ಕಂಡು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!