ಹೊಸದಿಗಂತ ಡಿಜಿಟಲ್ ಡೆಸ್ಕ್
ಅತ್ಯಾಚಾರಕ್ಕೆ ಒಳಗಾಗಿದ್ದ ಗೆಳತಿಗೆ ನ್ಯಾಯ ಸಿಗದ ಹಿನ್ನೆಲೆಯಲ್ಲಿ ಮನನೊಂದ 43 ವರ್ಷದ ವ್ಯಕ್ತಿಯೊಬ್ಬ ದಕ್ಷಿಣ ಮುಂಬೈನಲ್ಲಿರುವ ಮಹಾರಾಷ್ಟ್ರ ಸರ್ಕಾರದ ಪ್ರಧಾನ ಕಚೇರಿಯಾದ ಮಂತ್ರಾಲಯದ 6 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಕೆಳಗೆ ಹಾಕಲಾಗಿದ್ದ ಸುರಕ್ಷತಾ ಜಾಲ(ಬಲೆ)ದಿಂದಾಗಿ ಆತ ಬದುಕುಳಿದಿದ್ದಾನೆ. ಆದರೆ ಜಿಗಿಯುವಾಗ ಪ್ಲೈವುಡ್ಗೆ ತಗುಲಿದ ಕಾರಣ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಆತನನ್ನು ರಕ್ಷಿಸಿದ್ದು, ನಂತರ ಆತನನ್ನು ವಶಕ್ಕೆ ಪಡೆದಿದ್ದಾರೆ.
ಬಾಪು ನಾರಾಯಣ ಮೊಕಾಶಿ ಎಂದು ಗುರುತಿಸಲಾದ ವ್ಯಕ್ತಿ ಬೀಡ್ ಜಿಲ್ಲೆಯ ನಿವಾಸಿಯಾಗಿದ್ದು, ತನ್ನ ಗೆಳತಿ ಮೇಲೆ ಅತ್ಯಾಚಾರ ನಡೆದಿತ್ತು. ಇದರಿಂದ ನೊಂದ ಆಕೆ 2018 ರಲ್ಲಿ ನೇಣು ಹಾಕಿಕೊಂಡಿದ್ದಾಳೆ. ಅಂದಿನಿಂದ, ಅವನು ತನ್ನ ಗೆಳತಿಗೆ ನ್ಯಾಯವನ್ನು ಪಡೆಯಲು ನಿರಂತರವಾಗಿ ಪ್ರಕರಣವನ್ನು ಅನುಸರಿಸುತ್ತಿದ್ದೇನೆ. ಆದರೆ ಪ್ರಕರಣದ ಕುರಿತು ಯಾರೂ ಗಮನ ಹರಿಸುತ್ತಿಲ್ಲ. ಪ್ರಕರಣದ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿದರು. ಹೀಗಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿ ಮಾಡಲು ಗುರುವಾರ ಮಧ್ಯಾಹ್ನ 3 ಗಂಟೆಗೆ ಮಂತ್ರಾಲಯ ತಲುಪಿದ್ದೆ. ಆದರೆ ಸಂಪುಟ ಸಭೆಯ ಕಾರಣ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಇದೇ ಬೇಸರದಲ್ಲಿ ಆತ್ಮಹತ್ಯೆಗೆ ಯತ್ನಿಸಿದೆ ಎಂದು ವ್ಯಕ್ತಿ ಹೇಳಿದ್ದಾರೆ. ಕಟ್ಟಡದಿಂದ ಜಿಗಿದ ವ್ಯಕ್ತಿ ಅದೃಷ್ಟವಶಾತ್ ಕಟ್ಟಡದ ಒಳಗೆ ತೆರೆದ ಅಂಗಳವನ್ನು ಆವರಿಸಿರುವ ಸುರಕ್ಷತಾ ಜಾಲದ ಮೇಲೆ ಬಿದ್ದಿದ್ದಾನೆ. ಆತನ ಎಡ ಹಣೆಯ ಮೇಲೆ ಗಾಯಗಳಾಗಿದ್ದು ಅವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಜಿಟಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ