ಹೊಸದಿಗಂತ ವರದಿ ಹುಬ್ಬಳ್ಳಿ:
ವಿರೋಧ ಪಕ್ಷದ ನಾಯಕ ಆಯ್ಕೆ ಕೇಂದ್ರದ ವರಿಷ್ಠರ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಶಾಸಕ ಅರವಿಂದ ಬೆಲ್ಲದ ಸ್ಪಷ್ಟ ಪಡಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ಯಾವುದೇ ಜವಾಬ್ದಾರಿ ನೀಡಿದರು ಸಹ ಸೂಕ್ತವಾಗಿ ನಿಭಾಯಿಸುತ್ತೇವೆ ಎಂದರು. ವಿಧಾನಸಭೆ ಚುನಾವಣೆಯಲ್ಲಿ ನನ್ನ ಕ್ಷೇತ್ರದ ಜನರು ಆಯ್ಕೆ ಮಾಡಿದ್ದಾರೆ. ಅವರ ಸೇವೆ ಮಾಡುತ್ತೇನೆ. ಅದರ ಜೊತೆ ಪಕ್ಷದ ನೀಡಿದ ಜವಾಬ್ದಾರಿ ನಿಭಾಯಿಸುತ್ತೇನೆ ಎಂದು ತಿಳಿಸಿದರು.
ಪಕ್ಷ ಹಾಗೂ ಹಿರಿಯ ನಾಯಕರು ಡಿಸೈಡ್ ಮಾಡುತ್ತಾರೆ. ವಿರೋಧ ಪಕ್ಷದ ನಾಯಕರ ಆಯ್ಕೆ ಪಕ್ಷಕ್ಕೆ ಹಾಗೂ ಪಕ್ಷದ ನಾಯಕರಿಗೆ ಬಿಟ್ಟಿದ್ದು ಎಂದು ಹೇಳಿದರು.