ಹೊರನಾಡ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ನವೆಂಬರ್ 15ರಂದು ದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಹೊರನಾಡ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸುದೀತಿ ಅಂಬಳೆ, ಸಹ ಅಧ್ಯಕ್ಷರಾಗಿ ನೂತನ ಕೈಕಾಡೆ ಆಯ್ಕೆಯಾಗಿದ್ದಾರೆ.
ದೆಹಲಿ, ಗುರುಗಾಂವ್ ಹಾಗೂ ಭಿವಾಡಿಯಿಂದ ಆಸಕ್ತ ಕನ್ನಡ ಮಕ್ಕಳು ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದೆಹಲಿ ಘಟಕದ ಅಧ್ಯಕ್ಷ ಅರವಿಂದ ಬಿಜೈ ಆಯ್ಕೆಯಾದ ಹಾಗೂ ಭಾಗವಹಿಸಿದ ಮಕ್ಕಳಿಗೆ ಅಭಿನಂದನಾ ಮಾತುಗಳನ್ನಾಡಿದರು. ಶುಭಾ ದೇವಿಪ್ರಸಾದ್ ಸ್ವಾಗತಿಸಿದರು. ಪ್ರಸಾದ್ ನಾಯ್ಕ್ ವಂದಿಸಿದರು. ಸುಜಾತ ನಿಂಬಾಳ ಕಾರ್ಯಕ್ರಮ ನಿರೂಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!