ಹೊಸದಿಗಂತ ವರದಿ ಹುಬ್ಬಳ್ಳಿ:
ನಗರದ ಸ್ವಾಭಿಮಾನ ಫೌಂಡೇಶನ್ ವತಿಯಿಂದ ಜೂ.25 ರಂದು ಸಂಜೆ 5ಗಂಟೆಗೆ ದೇಶಪಾಂಡೆ ನಗರದ ಸವಾಯಿ ಗಂಧರ್ವ ಭವನದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ಮತ್ತು ಯುವ ಪ್ರತಿಭೆಗಳಿಗೆ ಸನ್ಮಾನಿಸುವ ಪ್ರತಿಭಾ ಪುರಸ್ಕಾರ 2022 ಹಮ್ಮಿಕೊಳ್ಳಲಾಗಿದೆ ಅಧ್ಯಕ್ಷ ಮಂಜುನಾಥ ಕೊಂಡಪಳ್ಳಿ ಹೇಳಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದ 180 ಸರಕಾರಿ ಶಾಲೆಯ ಮತ್ತು ಆರ್ಥಿಕವಾಗಿ ಹಿಂದೂಳಿದ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿ ಕಿಟ್ ಮತ್ತು ಪ್ರಶಸ್ತಿ ಪತ್ರ ಏಕಕಾಲಕ್ಕೆ ನೀಡಿ ಸನ್ಮಾನಿಸಲಾಗುವುದು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.