ಹೊಸ ದಿಗಂತ ವರದಿ , ಮಡಿಕೇರಿ:
ಸಮಗ್ರ ದೇಶ ಮತ್ತು ಎಲ್ಲಾ ವರ್ಗದ ಜನರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಉತ್ತಮ ಬಜೆಟ್ ಮಂಡಿಸಿದೆ ಎಂದು ವಿಧಾನಸಭೆಯ ಮಾಜಿ ಅಧ್ಯಕ್ಷ, ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಹೇಳಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ವಾಭಿಮಾನಿ ಹಾಗೂ ಸ್ವಾವಲಂಬಿ ಭಾರತದ ಕನಸನ್ನು ನನಸು ಮಾಡುವ ಬಜೆಟ್ ಇದಾಗಿದ್ದು, ಇಡೀ ದೇಶದ ಜನ ಮೆಚ್ಚುವ ರೀತಿಯಲ್ಲಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ
ಆರ್ಥಿಕ ಸಂಕಷ್ಟದ ನಡುವೆಯೂ, ಆರ್ಥಿಕ ಸಮತೋಲನವನ್ನು ಗಮದಲ್ಲಿಟ್ಟುಕೊಂಡು ಶಿಕ್ಷಣ, ಗ್ರಾಮೀಣ ಅಭಿವೃದ್ಧಿ ಮತ್ತು ಡಿಜಿಟಲೀಕರಣಕ್ಕೆ ಒತ್ತು ನೀಡಿ ಬಜೆಟ್ ಮಂಡಿಸಲಾಗಿದೆ. ಇದರಿಂದ ಕೊಡಗಿಗೂ ಲಾಭವಾಗಲಿದೆ ಎಂದು ಬೋಪಯ್ಯ ತಿಳಿಸಿದ್ದಾರೆ.