ಹೊಸದಿಗಂತ ವರದಿ ಉಡುಪಿ:
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಜೊತೆ ಕಾರ್ಯಕರ್ತರು ಸೆಲ್ಫಿ ತೆಗೆಯುವುದರೊಂದಿಗೆ ಮಿಥುನ್ ರೈ ಅವರ ಹೇಳಿಕೆ ತಿರುಗೇಟು ನೀಡಿದರು. ಸೇವಾ ಪಾಕ್ಷಿಕದ ಅಂಗವಾಗಿ ಕಾಪು ಪೇಟೆಯಲ್ಲಿ ಖಾದಿ ಮೇಳವನ್ನು ಉದ್ಘಾಟಿಸಿದ ನಂತರ ಮಹಿಳಾಮೋರ್ಚಾ, ಯುವಮೋರ್ಚಾ ಕಾರ್ಯಕರ್ತರು ಸಚಿವೆಯೊಂದಿಗೆ ಸೆಲ್ಫಿ ತೆಗೆಯಲು ಮುಗಿ ಬಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಜನಪರ ಕೆಲಸ ಮಾಡುತ್ತಿರುವ ಸರಳ ಸಂಸದೆ, ಸಚಿವರ ಜೊತೆ ಸೆಲ್ಫಿ ತೆಗೆದರೇ ಬಹುಮಾನ ನೀಡುವುದಾಗಿ ಕಾಂಗ್ರೆಸಿನ ಮಿಥುನ್ ರೈ ಹೇಳಿದ್ದಾರೆ. ಹೀಗಾಗಿ ಶೋಭಾಕ್ಕನವರ ಜೊತೆ ಮಹಿಳಾಮೋರ್ಚಾದ ತಂಡ ಸೆಲ್ಫಿ ತೆಗೆದು ಮಿಥುನ್ ರೈ ಅವರ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದೇವೆ ಎಂದರು.