ಹಿರಿಯ ಲೇಖಕ ಜಿ.ಎನ್. ರಂಗನಾಥ್ ರಾವ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಜಿ.ಎನ್. ರಂಗನಾಥ್‌ರಾವ್ ನಿಧನರಾಗಿದ್ದಾರೆ.
81 ವರ್ಷದ ರಂಗನಾಥ್ ರಾವ್ ಅವರು ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಹೆಸರು ಮಾಡಿದ್ದ ರಂಗನಾಥ್ ಅವರು ಪ್ರಜಾವಾಣಿ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದರು. ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಹಲವು ಪುಸ್ತಕಗಳನ್ನು ಬರೆದಿದ್ದರು. ನಾಟಕ, ಕಾದಂಬರಿ ಹಾಗೂ ಸಣ್ಣಕಥೆಗಳನ್ನು ಬರೆದಿದ್ದರು.

ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!