ಕಾಂಗ್ರೆಸ್ ಹಿರಿಯ ನಾಯಕಿ, ಕೇಂದ್ರ ಮಾಜಿ ಸಚಿವೆ ಗಿರಿಜಾ ವ್ಯಾಸ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್;

ಕಾಂಗ್ರೆಸ್ ಹಿರಿಯ ನಾಯಕಿ, ಕೇಂದ್ರದ ಮಾಜಿ ಸಚಿವೆ ಗಿರಿಜಾ ವ್ಯಾಸ್ (Girija Vyas) ಗುರುವಾರ ಅಹಮದಾಬಾದ್‌ನಲ್ಲಿ ನಿಧನರಾಗಿದ್ದಾರೆ.

ಗಿರಿಜಾ ಅವರ ನಿಧನದ ಕುರಿತು ಸಹೋದರ ಗೋಪಾಲ್ ಶರ್ಮಾ ಖಚಿತಪಡಿಸಿದ್ದಾರೆ.

ಉದಯಪುರದ ತಮ್ಮ ಮನೆಯಲ್ಲಿ ಏ.2ರಂದು ಗಿರಿಜಾ ವ್ಯಾಸ್ ದೇವರಿಗೆ ಆರತಿ ಮಾಡುವ ವೇಳೆ ಅವರ ಉಡುಪಿಗೆ ಬೆಂಕಿ ತಗುಲಿ ತೀವ್ರ ಸುಟ್ಟಗಾಯಗಳಾಗಿತ್ತು. ಈ ಹಿನ್ನೆಲೆ ಗಿರಿಜಾ ಅವರನ್ನು ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲೇ ಗಿರಿಜಾ ವ್ಯಾಸ್ ಕೊನೆಯುಸಿರೆಳೆದಿದ್ದಾರೆ.

ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥೆಯೂ ಆಗಿದ್ದ ಗಿರಿಜಾ ವ್ಯಾಸ್ ರಾಜ್ಯ ಮತ್ತು ಕೇಂದ್ರ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿಯೂ ಕೆಲಸ ಮಾಡಿದ್ದರು. 1991ರಲ್ಲಿ ಉದಯಪುರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಸಂಸತ್ತು ಪ್ರವೇಶಿಸಿದ್ದ ಗಿರಿಜಾ, ಅಂದಿನ ಪ್ರಧಾನಿಯಾಗಿದ್ದ ನರಸಿಂಹ ರಾವ್ ಅವರ ನೇತೃತ್ವದ ಸರ್ಕಾರದಲ್ಲಿ ಕೇಮದ್ರ ಸಚಿವೆಯಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!