ಹೊಸದಿಗಂತ ವರದಿ ಕಲಬುರಗಿ :
ವಿಧಾನಸಭೆ ಚುನಾವಣೆಯ ದಿನಾಂಕ ಸಮೀಪಿಸುತ್ತಿದ್ದು, ಪಕ್ಷಾಂತರ ಪರ್ವ ಜೋರಾಗಿದೆ. ಬ್ರಾಹ್ಮಣ ಸಮಾಜದ ಹಿರಿಯ ಮುಖಂಡರು ಹಾಗೂ ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಾ ಜಿ ಕುಲಕರ್ಣಿ ಸೋಮವಾರ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರ್ಪಡೆಯಾದರು.
ಈ ಸಂಧರ್ಭದಲ್ಲಿ ಶಾಸಕ ದತ್ತಾತ್ರೇಯ ಸಿ.ಪಾಟೀಲ ರೇವೂರ, ರಾಜ್ಯ ಉಪಾಧ್ಯಕ್ಷ ಮಾಲಿಕಯ್ಯಾ ಗುತ್ತೇದಾರ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು, ಮುಖಂಡರು, ಪದಾಧಿಕಾರಿಗಳು ಮತ್ತು ಬ್ರಾಹ್ಮಣ ಸಮಾಜದ ಮುಖಂಡರು, ಮತ್ತಿತರರು ಉಪಸ್ಥಿತರಿದರು.