ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಕಾರ್ ಬೈಕ್‌ಗೆ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಪ್ರಯಾಣಿಸುತ್ತಿದ್ದ ಎಸ್‌ಯುವಿ ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದು 20 ವರ್ಷದ ಯುವಕ ಗಾಯಗೊಂಡಿರುವ ಘಟನೆ ನಡೆದಿದೆ. ಪೋಲೀಸರ ಪ್ರಕಾರ, ಮೋಟಾರ್ ಸೈಕಲ್ ಚಲಾಯಿಸುತ್ತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ದಿಗ್ವಿಜಯ್ ಸಿಂಗ್ ಅವರ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಗಾಯಗೊಂಡ ವ್ಯಕ್ತಿ ರಾಂಬಾಬು ಬಗ್ರಿ (20) ಎಂದು ಗುರುತಿಸಲಾಗಿದ್ದು, ಕೂಡಲೇ ದಿಗ್ವಿಜಯ್ ಸಿಂಗ್ ಅವರ ವಾಹನದಿಂದ ಕೆಳಗಿಳಿದು ಆಸ್ಪತ್ರೆಗೆ ದಾಖಲಿಸಿದರು.

ಪ್ರಾಥಮಿಕ ಚಿಕಿತ್ಸೆ ನಂತರ ಭೋಪಾಲ್‌ಗೆ ಸ್ಥಳಾಂತರಿಸಲಾಗಿದೆ ಎಂದು ಕಾಂಗ್ರೆಸ್ ನಾಯಕನ ಆಪ್ತ ಮೂಲಗಳು ತಿಳಿಸಿವೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿಗ್ವಿಜಯ್ ಸಿಂಗ್, ಅವರ ವಾಹನ ನಿಧಾನವಾಗಿ ಸಾಗಿತು. ದೇವರ ದಯೆಯಿಂದ ಅವರು ಗಂಭೀರವಾಗಿ ಗಾಯಗೊಂಡಿಲ್ಲ. ಆತನನ್ನು ಭೋಪಾಲ್‌ಗೆ ರೆಫರ್ ಮಾಡಿರುವುದಾಗಿ ತಿಳಿಸಿದ್ದಾರೆ.

ದಿಗ್ವಿಜಯ್ ಸಿಂಗ್ ರಾತ್ರಿ ಭೋಪಾಲ್ ತಲುಪಿ ಚಿರಾಯು ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವನ್ನು ಭೇಟಿ ಮಾಡಿದರು. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಜಿರಾಪುರ ಪೊಲೀಸ್ ಠಾಣೆ ಪ್ರಭಾರಿ ಮುಖೇಶ್ ಗೌಡ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!